ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ

ದಾರವಾಡ ಜಿಲ್ಲೆಯ ಕನ್ನಡಿಗರು ಇದನ್ನು ಸೇರಿ, ಅವರ ವೇದಿಕೆ ತರ ಉಪಯೋಗಿಸಬಹುದು.

Latest Activity

Santosh Shetti is now a member of ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
on Monday
Manjunath H and Raghu joined ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 14
November 13
November 13
Akshata Joshi and SACHKHOJ academy joined ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 7
jahur ali and Shashikant Kurodi joined ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 6
girish.kulkarni and DHARWAD are now friends
November 5
MANJUNATH.TURMARI is now a member of ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 4
girish.kulkarni was featured
November 4
girish.kulkarni and Roopa V.P joined ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
November 3
vinay oursang is now a member of ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 31
DHARWAD added 2 photos
October 31
ravishankara is now a member of ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 28
veeresha nagaleekara is now a member of ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 27
arundati and Sheshagirirao are now friends
October 27
Sheshagirirao added 2 blog posts
October 26
Ravi Kadlimatti, Vijaykumar, Sheshagirirao and 1 more joined ಧಾರವಾಡ ಜಿಲ್ಲೆ ಕನ್ನಡಿಗರ ಸಂಪರ್ಕ ಜಾಲ
October 26
October 26
October 26
Sheshagirirao added a discussion
ವರಕವಿ ಬೇಂದ್ರೆ ಯವರ ಈ ಕವನದ ಬಗ್ಗೆ ಬರೆಯಲು ಪ್ರೆರೇಪಣೆ ಬಂದಿದ್ದು ಎರಡು ಕಾರಣಕ್ಕೆ, ಒಂದು ನಮ್ಮ ಸವಡಿಯವರ ನೀ ಹಿಂಗ ನೋಡಬ್ಯಾಡ ನನ್ನ ಲೇಖನ ಮತ್ತು ರತ್ನಮಾಲ ಪ್ರಕಾಶ್ ಅವರ ಗಾಯನ(ಇದೇ ಕವನದ್ದು). ವರಕವಿ ಬೇಂದ್ರೆ ಯವರ ಒಂದೊಂದು ಕವನವು ವಿಭಿನ್ನ ವಾದ ಕಾವ್ಯ ಶೈಲಿಯನ್ನು ಹೊಂದಿರುತ್ತವೆ. ಮಕ್ಕಳಿಗಾಗಿ...
October 26

Members

  • Sudhindra Deshpande
  • Prabhakar S.Yadawad
  • shantisen
  • darshan bedre
  • muktar
  • K  Naik
  • Rajesh Lobo
  • Jagadish Hiremath
  • Pradnyanand D M
  • Shrikanth.S.Yajurvedi
  • shivanand s gopai
  • Sasi Sekar Krish
  • Vinod P.Kulkarni
  • dattatreya velankar
  • NAGARAJ SHANKAR SHIRUR
  • virupaksh

RSS

Loading feed

RSS

Loading feed

 

Photos

Loading…

Blog Posts

Sheshagirirao

ನಾ ಕಂಡ ಅಪರೂಪದ ಚೆಲುವೆ

ನಾ ಕಂಡ ಅಪರೂಪದ ಚೆಲುವೆ


ಸಮಯ ಸಾಯಂಕಾಲ ೬ ಘಂಟೆ ನಾನು ಎಂದಿನಂತೆ ಕೆಲಸ ಮುಗಿಸಿ ಜಯನಗರದ ಬಸ್ ಸ್ಟಾಪ್ ನಲ್ಲಿ ನಿಂತಿದ್ದೆ. ಕೆಲಸದ ಜಂಜಾಟವನ್ನು ಮುಗಿಸಿ ನಿಂತ ನನ್ನ ಕಣ್ಣುಗಳು ಸೊತು ಸೊರಗಿದ್ದರು ಅಲ್ಲಿಗೆ ಬರುವ ಬಸ್ಸಿನ ಬೊರ್ಡನ್ನೆ ನೊಡುತ್ತಿತ್ತು. ಬರುವ ಎಲ್ಲಾ ಬಸ್ಸುಗಳಿಗೆ ಯಾವಗಲಾದರೊಮ್ಮೆ ಬೆಲ್ಲ ಸಿಗುವ ಇರುವೆಗಳಂತೆ ಜನರು ಮುಗಿ ಬೀಳುತ್ತಿದ್ದಾರೆ. ಕೊನೆಗು ನಾ ಕಾಯುತ್ತಿರುವ ಬಸ್ ಬಂದಾಯ್ತು, ಹಾಗು ಹೀಗು ಹರ ಸಾಹಸ ಮಾಡಿ ಬಸ್ಸನ್ನೆರಿದೆ. ದಿನದಂತೆ ಆ ಕಂಡಕ್ಟರ್ ನ ಮಂತ್ರ ಕಿವಿಯನ್ನು ಕೊರೆಯುತ್ತಿತ್ತು, ಅದೆ ಒಳಗೆ ಬನ್ನಿ, ಒಳಗೆ ಬನ್ನಿ, ಅಂತ. ಬಸ್ಸಿನಲ್ಲಿ ಆ ಎಲ್ಲಾ ಜನರ ಬೆವರಿನ ವಾಸನೆ, ಮತ್ತು… Continue

Posted by Sheshagirirao on October 26, 2009 at 6:41am

Sheshagirirao

ಚುಟುಕು ಕವನಗಳು

ಕವನ
ದಿನವೆಲ್ಲಾ ಭೂಮಿಯನ್ನು ಬೆಳಗಿದ ಸೂರ್ಯ
ಮೋಡದಂಚಿನಲಿ ಮರೆಯಾಗುತ್ತಿರಲು

ಮನಸಿನ ಪುಟಗಳಲ್ಲಿ ಮೂಡಿದ ಪದ ಪುಂಜವೊಂದು
ಕವನವಾಗಿ ಹೊರಹೊಮ್ಮುತಿದೆ

ಈ ಮುಂಜಾವಿನಲಿ ಒಲಾಡುವ ಮರದ ಎಲೆಗಳ ಮಧ್ಯೆದಿಂದ
ತೂರಿಕೊಂಡು ಬಂದು ಸೆರುವ ಸೂರ್ಯನ ಕಿರಣಗಳ ಹಾಗೆ

ಮನಸಿನಲ್ಲಿಯ ಭಾವನೆಯೆಂಬ ಕಿರಣಗಳು ಶಬ್ಧಗಳ ರೂಪದಿಂದ
ಹೊರ ಬಂದು ಕವನವಾಗಿ ಮೂಡುತಿವೆ ಬಿಳಿ ಹಾಳೆಯ ಮೇಲೆ

ಚಂದ್ರ....
ದಿನವೆಲ್ಲಾ ಕಣ್ಣು ತುಂಬಾ ತುಂಬಿಕೊಂಡ ಸೂರ್ಯ
ಮೋದದಲ್ಲಿ ಮರೆಯಾದ

ಮನಿಸಿನ ತುಂಬಾ ತುಂಬಿಕೊಂಡ ಚಂದ್ರ ಅದೇ
ಮೋಡದಲ್ಲಿ ರಾರಾಜಿಸುತ್ತಿದ್ದಾನೆ

ನಕ್ಷತ್ರಗಳ ರಾಶಿಯ ಮಧ್ಯೆ ಹೊಳ್ಯೆಯುವ ಚಂದ್ರನಿಗೆ
ನೀನೆಲ್ಲಿಗು ಹೊಗದಿರು ಎಂದರೆ

ಮ… Continue

Posted by Sheshagirirao on October 26, 2009 at 6:39am

GIREESH S GACHINAMATH

ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾಗಿರುವ ಉತ್ತರ ಕರ್ನಾಟಕದ ಜನತೆಗೆ , ಎಲ್ಲರೂ ನಮ್ಮ ನಮ್ಮ ಕೈಲಾದಷ್ಟು ಸಹಾಯ ಮಾಡೋಣ


ಇದು ನಮ್ಮವರ ಕಣ್ಣೊರೆಸೆ ಮುನ್ನುಗ್ಗೊ ಸಮಯಾ!

ಮುಂದಾಗು ಕನ್ನಡದ ಮನೆಯ ಮತ್ತೆ ಕಟ್ಟಲು,

ಕನ್ನಡ ರಾಜರಾಜೇಶ್ವರಿಯ ಋಣ ತೀರಿಸಲು!!ಅಂದೊಮ್ಮೆ...

ಕಾರ್ಗಿಲ್‌ ಯುದ್ಧದಿ

ದಂಡಿನ ಮಂದಿ ಬಲಿಯಾದಾಗ

ಮರುಗಿದ ಕನ್ನಡ ಮನವೇ ...



ಹಿಂದೊಮ್ಮೆ ...

ಲಾಥೂರ್‌, ಕಿಲಾರಿಯಲ್ಲಿ,

ಕಛ್‌, ಭುಜ್‌ನಲ್ಲಿ,

ಗುಡುಗುಡುಗಿ ನೆಲನಡುಗಿ,

ಮನೆಮುರಿದಾಗ

ಮಿಡಿದ ಕನ್ನಡ ಮನವೇ ...



ನಿನ್ನೆ ...

ಸಾಗರದಲೆಗಳು ತಮಿಳು ತೀರದಲಿ

ಮೃತ್ಯು ನರ್ತನ ನಡೆಸಿರಲು,

ಧಿಗ್ಗನೆ ನೆರವಿಗೆ

ಧಾವಿಸಿದ ಕನ್ನಡ ಮನವೇ ...



ಮೆಚ್ಚಿ ತಲೆಬಾಗುವೆ

ನಿನ್ನ ರಾಷ್ಟ್ರೀಯ ಭಾವಕ್ಕೆ!

ಜಾತಿ ಭಾಷೆ ಮೀರಿದ

ನಿನ್ನ ಉದಾತ್ತತೆಗೆ!!

ನಿನ್ನೊಡಲ ದೇಶ
Continue

Posted by GIREESH S GACHINAMATH on October 7, 2009 at 4:38am

GIREESH S GACHINAMATH

KANNADA ULIVIGAGI SHRAMISI

INDIA BEFORE




"Kannada Barutha??"
Aaaah! I am sure most of you in Bangalore would have heard this, but what
is "kannada barutha?" here it goes. Bangalore the IT capital of India , the
silicon city and now a Metro city opened its gates to almost all kinds of
people. Very evidently the recent poll census proved that there are only
47% of origin… Continue

Posted by GIREESH S GACHINAMATH on October 3, 2009 at 4:13am

DHARWAD

GAANA GANGE Dr. Gangubai Hangal



Continue

Posted by DHARWAD on July 21, 2009 at 6:21pm

DHARWAD

DISTRICT PROFILE

DISTRICT PROFILE



Historical Background:



Historical studies show that people from early Paleolithic age inhabited Dharwad district. A few places of antiquarian interest and several sites of historical importance are found in the district. The district was ruled by various dynasties from the 5th century onwards. Important among them are Badami and Kalyan Chalukyas, Rastrakutas, Vijayanagar, Adilshahi, Mysore kingdom and Peshawas of Pune. Due to the rule of Peshwas, influence of Marathi is se… Continue

Posted by DHARWAD on July 11, 2009 at 9:58am

DHARWAD

KASUTI

KASUTI

is a form of traditional hand embroidery and means same as kashidakari. Its origin goes back to the Chalukya period somewhere in 6th and 10th Century. This art was patronized in the royal courts and even today has a domineering existence in and around Dharwad. This exclusive work is created through the counting of warp and wefts, after this the designs are either traced or implanted as outlines.

This Kasuti embroidery brings out the best of folk craft. The beautiful geometric designs ar… Continue

Posted by DHARWAD on July 11, 2009 at 9:56am

DHARWAD

PEDHA

PEDHA
Dharwad is famous for its Dharwad Pedha. Pedha is a sweetmeat delicacy prepared using rich cream milk. In Northern Karnataka, Babu Singh Thakur Singh Pedha is a well known name. If you want the real taste of pedha, Thakur Singh pedha is the one for you. Thakur Singh Pedha has a history of over 150 years run by five
generations. The quality is maintained with high standards and can be stored for nearly 2 months. The sweetmart has won laurels and has been honoured with





v Lord willington… Continue

Posted by DHARWAD on July 11, 2009 at 9:55am

DHARWAD

D.R.Bendre:

D.R.Bendre:

Dattatraya Ramachandra (D.R) Bendre (1896-1981) is one of the foremost poets not only of Karnataka but of India. This is borne out by his winning the Jnanapith Award in 1973 which rates as the Noble Prize of India.

In the words of English poet W.B.Yeats," every genius takes after his neither".Bendre's mother exercised a deep influence on him in that she instilled in him reverence for life which shaped him into a poet of celebration. The songs he heard from his mother in childhood m… Continue

Posted by DHARWAD on July 11, 2009 at 9:53am — 1 Comment

DHARWAD

Basavaraj Rajguru

Basavaraj Rajguru

Elivaal is a small village in Kundgol taluk of Dharwad district. Originally gurus to the princes of Keladi (hence, the surname Rajguru), the family migrated to Elivaal. Basavaraj was born on August 24, 1920. His elder uncle was a Sanskrit scholar and an astrologer. Father Mahaantaswamy was fond of music. He had been to Tanjore and learnt music. He played well on the violin. Channabasavaswami, the younger uncle of Basavaraj was well-versed in bayalaata (open air folk theatre).… Continue

Posted by DHARWAD on July 11, 2009 at 9:52am

RSS

Loading feed

RSS

Loading feed

 
 

About

DHARWAD DHARWAD created this social network on Ning.

Create your own social network!

Forum

Sheshagirirao

ಹಿಂದ ನೋಡದ ಗೆಳತಿ.....

Started by Sheshagirirao Oct 26.

DHARWAD

ekavi 2003 2004 -2005 -2006 -2007

Started by DHARWAD Jul 11.

DHARWAD

EKAVI SCHOOL ADOPTION PROGRAMS -

Started by DHARWAD Jul 11.

DHARWAD

ekavi activities 2008

Started by DHARWAD Jul 11.

DHARWAD

ekavi activities 2009

Started by DHARWAD Jul 11.

Groups

Events

Badge

Loading…

RSS

ಹೊಣೆಗಾರಿಕೆ

ಮೊನ್ನೆ ಹೀಗೇ ನನ್ನ ಪರ್ಸನಲ್ ಮೇಲ್ ಬಾಕ್ಸ್ ನಲ್ಲಿ ಏನೋ ಹುಡುಕುತ್ತಿದ್ದಾಗ ನನಗೆ ಸ್ನೇಹಿತರೊಬ್ಬರು ತುಂಬಾ ಹಿಂದೆ ಕಳಿಸಿದ್ದ ಈ-ಮೇಲ್ ಒಂದು ಕಣ್ಣಿಗೆ ಬಿತ್ತು. ಪರಮಹಂಸ ಶ್ರೀ ನಿತ್ಯಾನಂದ ಎಂಬ ಮಹನೀಯರೊಬ್ಬರು ಬರೆದ ಒಂದು ಚಿಕ್ಕ ಲೇಖನ ಅದರಲ್ಲಿತ್ತು. ಅದು ಜುಲೈ 13, 2006 ರ ಎಕನಾಮಿಕ್ ಟೈಮ್ಸ್ ನ ಬೆಂಗಳೂರು ಆವೃತ್ತಿಯಲ್ಲಿ ಪ್ರಕಟವಾಗಿತ್ತಂತೆ. ಒಬ್ಬ ವ್ಯಕ್ತಿ ಜೀವನದ ಯಾವುದೇ ರಂಗದಲ್ಲಿ ಬೆಳೆಯಲು ಮೂಲಭೂತವಾದ ಮತ್ತು ಅತಿ ಅಗತ್ಯವಾದ ಅಂಶಗಳಲ್ಲಿ ನಾವು ಮಾಡುವ ಪ್ರತಿ ಕೆಲಸದ ಸಂಪೂರ್ಣ ಜವಾಬ್ದಾರಿಯನ್ನು ನಾವೇ ಹೊರುವುದು ಎಷ್ಟು ಮುಖ್ಯ ಎಂದು ಅದರಲ್ಲಿ ಅವರು ತುಂಬಾ ಚೆನ್ನಾಗಿ ವಿವರಿಸಿದ್ದರು. ಅದರಲ್ಲಿನ ಕೆಲವು ಅಣಿಮುತ್ತುಗಳು, ಇಲ್ಲಿ ನಿಮ್ಮೆಲ್ಲರಿಗಾಗಿ:

1) Responsibility is consciousness.

2) When you work with no feelings of responsibility, you will work and feel like a slave. When you work with responsibility, your capacity will expand and you will flower and radiate energy.

3) When you take up responsibility for the entire cosmos, you will expand and look like a leader!

ಹೌದಲ್ವಾ! ದಿನ ನಿತ್ಯ ನಾವು ಎಷ್ಟೋ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಮನೆಯಲ್ಲಾಗಲಿ, ಕೆಲಸದ ಮೇಲಿರಲಿ, ನಮ್ಮನ್ನು ನಂಬಿ ನಮ್ಮ ಮೇಲೆ ಒಂದಿಲ್ಲೊಂದು ಕೆಲಸವನ್ನು ವಹಿಸಿರುತ್ತಾರೆ. ಆ ಕೆಲಸವನ್ನು ನಾವು ಮಾಡಿ ಮುಗಿಸುವುದಷ್ಟೇ ಮುಖ್ಯವಲ್ಲ; ಅದರ ಸಂಪೂರ್ಣ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ. ಕೆಲಸ ಮುಗಿಸಿ ಕೈ ತೊಳೆದುಕೊಳ್ಳಲಾಗುವುದಿಲ್ಲ. ನಂತರದ ಎಲ್ಲ ಪರಿಣಾಮಗಳಿಗೂ ನಾವೇ ಹೊಣೆಗಾರರಾಗಿರಬೇಕಾಗುತ್ತದೆ. ಈ ಹೊಣೆಗಾರಿಕೆಯನ್ನೇ ನಾವು ಅಕೌಂಟಬಿಲಿಟೀ, ಉತ್ತರದಾಯಿತ್ವ ಅನ್ನೋದು. ಶ್ರೀ ನಿತ್ಯಾನಂದರು ಹೇಳಿದಂತೆ, ಜವಾಬ್ದಾರಿ ಇಲ್ಲದೇ ಕೆಲಸ ಮಾಡಿದರೆ ನಾವು ಗುಲಾಮರಂತಾಗುತ್ತೇವೆ. ಅದೇ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸಿದರೆ ಉಳಿದವರಿಗೆ ಮಾದರಿಯಾಗುವ ನಾಯಕರಾಗುತ್ತೇವೆ.


ಜೀವನದಲ್ಲಿ ಬೆಳೆಯಬೇಕೆಂದರೆ ಸ್ವಲ್ಪ ಮಟ್ಟಿಗಿನ ಕ್ಯಾಲ್ಕ್ಯುಲೇಟೆಡ್ ರಿಸ್ಕ್ ತೆಗೆದುಕೊಳ್ಳುವುದು ಅನಿವಾರ್ಯ. ನಮ್ಮ ಸ್ವಯಂ ಶಕ್ತಿಯ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದ್ದರೆ ಮಾತ್ರ ಆ ತರಹದ ರಿಸ್ಕ್ ತೆಗೆದುಕೊಳ್ಳಲು ಸಾಧ್ಯ. ಆದರೆ ಯಾವುದೇ ರಿಸ್ಕ್ ತೆಗೆದುಕೊಳ್ಳದೇ, ಯಾವುದೇ ಕೆಲಸದ ಸಂಪೂರ್ಣ ಹೊಣೆಗಾರಿಕೆಯನ್ನು ವಹಿಸಿಕೊಳ್ಳದೇ ಕೆಲಸ ಮಾಡುವುದು ಗುಲಾಮಗಿರಿಯಲ್ಲದೇ ಬೇರೇನಲ್ಲ. ನಾವು ಸ್ವಂತ ನಿರ್ಧಾರಗಳನ್ನು ತೆಗೆದುಕೊಂಡು, ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಅದನ್ನು ಸಮರ್ಪಕವಾಗಿ ಮಾಡಿ ಮುಗಿಸಿದಾಗ ಅದರಿಂದ ಒಳ್ಳೆಯದೇ ಆಗಬಹುದು, ಅಥವಾ ಕೆಟ್ಟದ್ದೂ ಆಗಬಹುದು. ಒಳ್ಳೆಯದಾದ್ರೆ ನಮಗೆ ಇನ್ನೂ ಹೆಚ್ಚಿನ ಜವಾಬ್ದಾರಿ ಹೊರಲು ಸ್ಪೂರ್ತಿ ಸಿಗುತ್ತದೆ ಮತ್ತು ನಮ್ಮ ಆತ್ಮ ವಿಶ್ವಾಸ (ಸೆಲ್ಫ್ ಕಾನ್ಫಿಡೆನ್ಸ್) ಹೆಚ್ಚುತ್ತದೆ. ಒಂದು ವೇಳೆ ಕೆಲಸದ ಪರಿಣಾಮ ಅನಿರೀಕ್ಷಿತವಾಗಿ ಕೆಟ್ಟದ್ದಾದರೆ ನಾವು ಒಂದು ಹೊಸ ಪಾಠ ಕಲಿತಂತಾಗುತ್ತದೆ. ಮುಂದಿನ ಸಲ ಯಾವುದೇ ಕೆಲಸ ಮಾಡುವಾಗ ಇನ್ನೂ ಹೆಚ್ಚಿನ ಎಚ್ಚರಿಕೆ ವಹಿಸುತ್ತೇವೆ. ಹೊಣೆಗಾರಿಕೆಯೇ ಇಲ್ಲದೇ ಕೆಲಸ ಮಾಡಿದಾಗ 'ಕೆಲಸ ಮಾಡಿ ಪ್ರತಿಫಲ ಪಡೆದೆ' ಅನ್ನುವುದನ್ನು ಬಿಟ್ಟರೆ ಅದಕ್ಕಿಂತ ಹೆಚ್ಚಿನದೇನನ್ನೂ ಸಾಧಿಸಲಾಗುವುದಿಲ್ಲ. ಕಡೇತನಕ ಬೇರೆಯವರು ಹೇಳುವ ಕೆಲಸವನ್ನೇ ಮಾಡುತ್ತಾ "ನೀ ಹೇಳಿದೆ, ಅದಕ್ಕೆ ನಾ ಮಾಡಿದೆ" ಎಂಬ ಉಡಾಫೆ ಪ್ರವೃತ್ತಿ ಮೈಗೂಡುತ್ತದೆ.

ಜವಾಬ್ದಾರಿ ಬಂದಾಗ ನಿಭಾಯಿಸುವುದು ಬೇರೆ, ನಾವೇ ಜವಾಬ್ದಾರಿ ಹೊರಲು ಮುಂದಾಗುವುದು ಬೇರೆ. ಜೀವನದಲ್ಲಿ ಎಲ್ಲವೂ ತಾನೇ ತಾನಾಗಿ ಬರುವುದಿಲ್ಲ. ಜವಾಬ್ದಾರಿ ಹೊರಲು ಸಿದ್ಧನಿರದವನು ಅದು ತಾನಾಗೇ ಬಂದಾಗಲೂ ಒಂದಿಲ್ಲೊಂದು ಕಾರಣ ಹೇಳಿ ಅದರಿಂದ ನುಣುಚಿಕೊಳ್ಳಲು ಪ್ರಯತ್ನಿಸ್ತಾನೆ. ಹಾಗಾದಾಗ, ಆ ವ್ಯಕ್ತಿಯ ಜೀವನ ನಿಂತ ನೀರಾಗುತ್ತದೆ. ಹಳೆಯ ಸೋಲನ್ನೆಲ್ಲ ಮರೆತು, ಸಾಧ್ಯವಾದರೆ ಅವುಗಳಿಂದ ಸ್ವಲ್ಪ ಪಾಠವನ್ನೂ ಕಲಿತು, ಮೈಗೊಡವಿ ಎದ್ದು ಹೊಸ ಜವಾಬ್ದಾರಿಯನ್ನು ಹೊರಲು ಸಿದ್ಧನಾಗುವವನಿಗೆ ಒಂದಿಲ್ಲೊಂದು ಅವಕಾಶ ಹುಡುಕಿಕೊಂಡು ಬರುತ್ತದೆ. ಅದು ಒಬ್ಬ ವ್ಯಕ್ತಿಯ ವೈಯಕ್ತಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ತುಂಬಾ ಅಗತ್ಯ ಕೂಡ.

ಮನೆಯಲ್ಲಾಗಲೀ, ಕಚೇರಿಯಲ್ಲಾಗಲಿ - ನಾವು ಮಾಡುವ ಕೆಲಸದ ಸಂಪೂರ್ಣ ಜವಾಬ್ದಾರಿ ಹೊರಲು ಸಿದ್ಧರಾದಾಗಲೇ ನಮ್ಮ ಜೀವನಕ್ಕೆ ಒಂದು ಅರ್ಥ ಬರುತ್ತದೆ. ಹೊಣೆಗಾರಿಕೆಯಿಂದ ಮಾಡುವ ಒಂದು ಪುಟ್ಟ ಕೆಲಸವು ನೀಡುವ ತೃಪ್ತಿ, ಆತ್ಮ ಸಂತೋಷವನ್ನು ಹೊಣೆಗಾರಿಕೆಯಿಲ್ಲದೇ ಮಾಡುವ ಎಷ್ಟೇ ದೊಡ್ಡ ಮತ್ತು ಎಷ್ಟೇ ದುಡ್ಡು ತಂದು ಕೊಡುವ ಯಾವ ಗುಲಾಮಗಿರಿ ಕೆಲಸವೂ ಕೊಡಲ್ಲ, ಅಲ್ವಾ?

ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು


ತಮಗೆ ಮತ್ತು ತಮ್ಮ ಕುಟುಂಬವರ್ಗದವರೆಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ದೀಪಗಳ ಹಬ್ಬ ನಮ್ಮೆಲ್ಲರ ಬಾಳಿನಲ್ಲಿ ಇಂತಹ ಅನಂತ ದಿವ್ಯಜ್ಞಾನದ ಜ್ಯೋತಿಗಳನ್ನು ಬೆಳಗಿಸಲಿ ಎಂದು ಪ್ರಾರ್ಥಿಸುತ್ತೇನೆ.

ಕಟು ಸತ್ಯ

'
ನನ್ನ ಮೊಟ್ಟಮೊದಲ ಬ್ಲಾಗ್ ಪೋಸ್ಟ್ ನಲ್ಲಿ ತಮಿಳರ ಭಾಷಾ ದುರಭಿಮಾನ ಮತ್ತು ಬೆಂಗಳೂರಿನ ಬಗ್ಗೆ ಬರೆದಿದ್ದೆ. ಬೆಂಗಳೂರಿನಲ್ಲಿ ತಮಿಳರ ಪ್ರಭಾವ ಎಷ್ಟರಮಟ್ಟಿಗಿದೆ ಎಂಬುದನ್ನು ಸ್ವಂತ ಅನುಭವವೊಂದನ್ನು ಆಧಾರವಾಗಿಟ್ಟುಕೊಂಡು ಆ ಪುಟ್ಟ ಲೇಖನದಲ್ಲಿ ಹೇಳಿದ್ದೆ. ಆ ಕಟು ಸತ್ಯವನ್ನು ಪುಷ್ಟೀಕರಿಸುವಂತಹ ಈ-ಮೈಲ್ ಫಾರ್ವರ್ಡ್ ಒಂದು ನಿನ್ನೆ ಸ್ನೇಹಿತನೊಬ್ಬನಿಂದ ಬಂತು.

ಬೆಂಗಳೂರಿನಲ್ಲಿ ಕನ್ನಡಕ್ಕೆ ಒದಗಿರುವ ದುಸ್ಥಿತಿಯನ್ನು ಬಿಂಬಿಸುವ ಈ ಚಿತ್ರವನ್ನು ನೋಡಿ ನಗಬೇಕೋ ಅಳಬೇಕೋ ಗೊತ್ತಾಗ್ಲಿಲ್ಲ.

'ಈ ಕಾರ್ಟೂನ್ ಚಿತ್ರಿಸಿದ ರಾಮಧ್ಯಾನಿ ಅವರಿಗೆ ಧನ್ಯವಾದಗಳು.

ಬ್ಲಾಗಿನಲ್ಲಿ ಬರೆಯುವುದನ್ನೇ ಬಿಟ್ಟು ಬಿಡಬೇಕೆನಿಸುತ್ತಿದೆಯಾ?

ಕೆಲವು ಸಲ ಹಾಗನ್ನಿಸುವುದು ಸಹಜ.

ಮತ್ತೊಬ್ಬರು ನಮ್ಮ ಸಹನೆ ಪರೀಕ್ಷಿಸುವ ಮಟ್ಟಿಗೆ ನಮ್ಮ ಮೇಲೆ ಕೆಸರೆರಚಾಟ ಮಾಡುವದು, ನಮ್ಮ ಚಾರಿತ್ರ್ಯವಧೆಗೆ ಕೈ ಹಾಕುವುದು, ತೀರಾ ಅಪರಿಚಿತರೂ ಸಹ ಒಂದು ನಿರ್ದಿಷ್ಟ ಉದ್ದೇಶವಿಲ್ಲದೇ ನಮ್ಮ ಅವನಿಂದನೆ ಮಾಡುವುದು,... ಆಗೆಲ್ಲ, "ಛೇ! ಇಂಥವರೆಲ್ಲ ಇರುವ ಪರಿಸರದ ಸಹವಾಸವೇ ಬೇಡಪ್ಪಾ" ಅಂತಾ ಮೇಲೆದ್ದುಬಿಡಲು ಸಿದ್ಧರಾಗುತ್ತೇವೆ. ಆದರೆ, ಎಲ್ಲಿ ಹೋದರೂ ಅಂಥ ಜನರಿಂದ ತಪ್ಪಿಸಿಕೊಳ್ಳೋಕಾಗಲ್ಲ. ಜೀವನದಲ್ಲಿ ಸುಖ-ದುಖಃ, ಸಿಹಿ-ಕಹಿ, ಬೆಳಕು-ಕತ್ತಲು ಮುಂತಾದವುಗಳೆಲ್ಲ ಎಷ್ಟರಮಟ್ಟಿಗಿನ ಸಾರ್ವಕಾಲಿಕ ಸತ್ಯಗಳೋ, ಜಗತ್ತಿನಲ್ಲಿ ಒಳ್ಳೆಯವರು-ಕೆಟ್ಟವರು ಎರಡೂ ಥರದ ಜನ ಇರ್ತಾರೆ ಅನ್ನೋದೂ ಸಹ ಅಷ್ಟೇ ಸಾರ್ವಕಾಲಿಕ ಸತ್ಯ. ಇಲ್ಲಿರುವ ಕೆಟ್ಟ ಜನರಿಂದ ತಪ್ಪಿಸಿಕೊಂಡು ಬೇರೆ ಕಡೆ ಹೋದರೆ ಅಲ್ಲಿ ಇನ್ನೊಂದು ಥರದ ಕೆಟ್ಟ ಜನ ಸಿಗ್ತಾರೆ. ಕೆಟ್ಟದು ಇದ್ದಲ್ಲಿಯೇ ಒಳ್ಳೆಯತನದ ಅನುಭೂತಿ ಆಗಲು ಸಾಧ್ಯ, ಅಲ್ಲವೇ? ಎಲ್ಲ ಕಡೆ ಕೆಟ್ಟ ಜನ ಇದ್ದಾರೆ ಅಂತ ಜಗತ್ತನ್ನೇ ತೊರೆದು ಹೋಗುವುದು ಸಾಧ್ಯವೇ?

ಇಷ್ಟೆಲ್ಲಾ ಹೇಳಬೇಕೆಂದು ಅನಿಸಿದ್ದು, ತೀರ ಇತ್ತೀಚೆಗೆ ಬ್ಲಾಗುಲೋಕದಲ್ಲಿ ಆಗುತ್ತಿರುವ ಕೆಲವು ಕೆಟ್ಟ ಬೆಳವಣಿಗೆಗಳಿಂದ ಬೇಸತ್ತು ಕೆಲವು ಜನ ಬ್ಲಾಗುಲೋಕದ ಮಹನೀಯರು ಮತ್ತು ಪ್ರತಿಭಾವಂತ ಸಹೃದಯೀ ಬ್ಲಾಗುಮಿತ್ರರು ಬ್ಲಾಗಿಂಗ್ ಮಾಡುವುದನ್ನೇ ನಿಲ್ಲಿಸುತ್ತಿರುವದನ್ನು ಕಂಡಾಗ. ಎಲ್ಲ ಕ್ಷೇತ್ರಗಳಲ್ಲಿ ಇರುವಂತೆ ಬ್ಲಾಗುಲೋಕದಲ್ಲೂ ಸಹ ವೈಯಕ್ತಿಕ ದ್ವೇಷ ಸಾಧಿಸುವವರು, ಮತ್ತೊಬ್ಬರಿಗೆ ವಿನಾಃಕಾರಣ ತೊಂದರೆ ಕೊಟ್ಟು ಸಂತಸಪಡುವ ಸ್ಯಾಡಿಸ್ಟ್ ಗಳು, ಮತ್ತೊಬ್ಬರ ಏಳ್ಗೆ ಸಹಿಸಲಾಗದೆ ಕಾಲೆಳೆಯುವ ಮತ್ಸರವಾದಿಗಳು ಸಾಕಷ್ಟು ಜನ ಇದ್ದಾರೆ. ಅದರಲ್ಲೂ ಅಂತರ್ಜಾಲದಲ್ಲಿ ಇರುವ ಕೆಲವು ನ್ಯೂನತೆಗಳಿಂದಾಗಿ ಅಂಥವರನ್ನು ದೂರವಿರಿಸುವುದು ತುಂಬಾ ಕಷ್ಟದ ಕೆಲಸ. ಅಂಥವರನ್ನು ಗುರುತಿಸಿ, ಶಿಕ್ಷಿಸುವುದು ಇನ್ನೂ ಕಷ್ಟದ ಕೆಲಸ.

ಹೇಳಿ-ಕೇಳಿ ಅಂತರ್ಜಾಲ ಎಂಬುದು ಎಲ್ಲರಿಗೂ, ಹೆಚ್ಚು ಕಡಿಮೆ ಎಲ್ಲ ರೀತಿಯಿಂದಲೂ ಮುಕ್ತವಾಗಿರುವ ಸ್ಥಾನ. ಅಲ್ಲಿ ನಿರ್ಬಂಧನೆಗಳನ್ನು ಹಾಕುವುದು ಮತ್ತು ಅವುಗಳ ಪಾಲನೆಯಾಗುತ್ತಿದೆಯೇ ಎಂದು ಹದ್ದಿನಕಣ್ಣು ಇಟ್ಟು ಕಾಯುವುದು ತುಂಬಾ ಕಷ್ಟದ ಕೆಲಸ. ಹೀಗಾಗಿ ಉಳಿದೆಲ್ಲ ಕಡೆಗಿಂತ ಇಲ್ಲಿ ವಿಶೇಷವಾಗಿ ಸಾಕ್ಷರ-ದುರ್ಜನರ ಕಾಟ ಸ್ವಲ್ಪ ಜಾಸ್ತೀನೇ ಅನ್ನಬಹುದು. ಹಾಗಂತ ಬ್ಲಾಗಿನಲ್ಲಿ ಬರೆಯುವುದನ್ನೇ ನಿಲ್ಲಿಸಿದರೆ ಹೇಗೆ? "ರೋಡ್ ರೇಜ್ ಜಾಸ್ತಿ, ಅದ್ಕೋಸ್ಕರ ಇನ್ಮುಂದೆ ನಾನು ರಸ್ತೆಯಲ್ಲಿ ಗಾಡಿ ಓಡಿಸಲ್ಲ" ಅನ್ನೋಕಾಗುತ್ತಾ? ಮನೆ ಸುತ್ತ ನಾಯಿಗಳ ಕಾಟ ಜಾಸ್ತಿ ಅಂತ ಮನೆಗೆ ಹೋಗದೇ ಇರೋಕಾಗುತ್ತಾ? ಯಾವುದೋ ಒಂದು ನಾಯಿ ಬೊಗಳಿತು ಅಂತ ದೇವಲೋಕ ಹಾಳಾಗೋಲ್ಲ, ಅಲ್ವಾ? ಹೀಗೆ, ಕೆಟ್ಟ ಜನ ಬ್ಲಾಗುಲೋಕದಲ್ಲಿ ಜಾಸ್ತಿ ಅಂತ ಬ್ಲಾಗಿನಲ್ಲಿ ಬರೆಯುವುದನ್ನೇ ಬಿಟ್ಟು ಪಲಾಯನವಾದಿಗಳಾಗುವುದು ಎಷ್ಟರಮಟ್ಟಿಗೆ ಸರಿ ಎಂದು ನನಗಂತೂ ಗೊತ್ತಾಗುತ್ತಿಲ್ಲ.

ಬ್ಲಾಗಲ್ಲಿ ಬರೆಯೋದು ಬಿಟ್ಟು, ಪುಸ್ತಕದಲ್ಲಿ ಬರೀತೀರಾ? ಪತ್ರಿಕೆಯಲ್ಲಿ ಬರೀತೀರಾ? ಅಲ್ಲಿ ಕಾಲೆಳೆಯುವವರು, ಅವಹೇಳನ ಮಾಡುವವರು, ಅನಾವಶ್ಯಕ ತೊಂದರೆ ಕೊಡುವವರು ಇಲ್ಲವೇ? ಹೀಗೆ ಬರೆಯುವುದನ್ನೇ ನಿಲ್ಲಿಸುವ ಬದಲು, ಸಾಧ್ಯವಾದಷ್ಟು ಗಟ್ಟಿಯಾಗಿ ನಮ್ಮ ಸುತ್ತ ನಾವೇ ಒಂದು ರಕ್ಷಣಾ ಗೋಡೆ ನಿರ್ಮಿಸಿಕೊಂಡು ಬರೆಯುವುದು ಒಳಿತಲ್ಲವೇ? ನಾನು ಬ್ಲಾಗು ಲೋಕಕ್ಕೆ ಕಾಲಿಟ್ಟಿದ್ದು ಸಹ ಕೆಲವು ಬ್ಲಾಗುಗಳ ಬರಹಗಳಿಂದ ಮತ್ತು ಅವುಗಳಲ್ಲಿನ ವಿಚಾರಗಳಿಂದ ಪ್ರಭಾವಿತನಾಗಿಯೇ. ನಾವು ಬರೆಯುವುದು ಕೇವಲ ನಮ್ಮ ಆತ್ಮಸಂತೋಷಕ್ಕಾಗಿ ಮಾತ್ರ ಎಂದು ನಮ್ಮಷ್ಟಕ್ಕೆ ನಾವು ಹೇಳಿಕೊಂಡರೂ, ನಮ್ಮ ಬರಹ ಅದನ್ನು ಓದುವ ಎಷ್ಟೋ ಜನರ ಮೇಲೆ ಗಾಢ ಪರಿಣಾಮ ಬೀರಿ ಅವರಲ್ಲೂ ಬರೆಯುವ ಉತ್ಸಾಹವನ್ನು ತಂದು, ಅವರ ಜೀವನದಲ್ಲೂ ಒಂದು ಚಿಕ್ಕ ಬದಲಾವಣೆಯನ್ನು ಉಂಟು ಮಾಡಬಲ್ಲುದು ಅನ್ನೋದನ್ನ ನಾವು ಮರೆಯಬಾರದು, ಅಲ್ಲವೇ?

ದಿನದಿಂದ ದಿನಕ್ಕೆ ಬ್ಲಾಗ್ ಸ್ಪಾಟ್, ವರ್ಡ್ ಪ್ರೆಸ್ ನಂತಹ ಬ್ಲಾಗ್ ಹೋಸ್ಟ್ ಗಳು ಬ್ಲಾಗಿನಲ್ಲಿ ಹೆಚ್ಚು ಹೆಚ್ಚು ಪ್ರೈವಸೀ ಅಳವಡಿಸುವ ಕೆಲಸ ಮಾಡುತ್ತಿವೆ. ಅವುಗಳನ್ನು ಉಪಯೋಗಿಸಿಕೊಳ್ಳೋಣ. ಉದಾಹರಣೆಗೆ, ಅನಾಮಧೇಯ (ಅನಾನಿಮಸ್) ಕಮೆಂಟುಗಳನ್ನು ಬರೆಯುವುದನ್ನು ನಿರ್ಬಂಧಿಸುವುದು. ಈ ಸೌಲಭ್ಯವಂತೂ ತುಂಬಾ ಹಿಂದಿನಿಂದ ಇದೆ. ಸದ್ಯಕ್ಕೆ ಬ್ಲಾಗುಲೋಕದ ಬಗ್ಗೆ ಇರುವ ಅತಿದೊಡ್ಡ ದೂರು ಅಂದ್ರೆ ಈ ಅನಾಮಧೇಯ ಕಮೆಂಟುಗಳದ್ದು. ನಾನು ನೋಡಿರುವಂತೆ, ಬೇಜವಾಬ್ದಾರಿಯ ಕಮೆಂಟುಗಳನ್ನು ಬರೆಯುವವರು ತುಂಬಾ ಸೋಂಬೇರಿಗಳಾಗಿರುತ್ತಾರೆ. ಅವರಿಗೆ ಒಂದು ಬ್ಲಾಗರ್ ಅಕೌಂಟ್ ಓಪನ್ ಮಾಡಿ ಅದರಿಂದ ಕಮೆಂಟ್ ಮಾಡುವುದೂ ಸಹ ಕಷ್ಟದ ಕೆಲಸ. ಅದಕ್ಕೇ ಅವರು ಅನಾಮಧೇಯ ಕಮೆಂಟುಗಳನ್ನು ಬರೆಯುವುದು. ಅನಾಮಧೇಯ ಕಮೆಂಟುಗಳನ್ನು ನಿರ್ಬಂಧಿಸುವುದರಿಂದ ಅಂಥವರನ್ನು ಸ್ವಲ್ಪಮಟ್ಟಿಗೆ ದೂರ ಇಡಬಹುದು. ಒಂದು ವೇಳೆ ಅವರೊಂದು ಅಕೌಂಟ್ ಓಪನ್ ಮಾಡಿ ಅದರಿಂದ ನಿಂದನಾತ್ಮಕ ಕಮೆಂಟುಗಳನ್ನು ಹಾಕಿದರೆ ಅಂಥವರ ಅಕೌಂಟನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹಿಸಬಹುದು. ಕಮೆಂಟುಗಳನ್ನು ಮಾಡರೇಟ್ ಮಾಡಿದ ಮೇಲೆ ಬ್ಲಾಗಿನಲ್ಲಿ ಗೋಚರಿಸಲು (ಪಬ್ಲಿಶ್ ಮಾಡಲು) ಬಿಡುವುದು ಇನ್ನೂ ಒಳ್ಳೆಯದು. ಹೀಗೆ ಮಾಡುವುದರಿಂದ ನಿಂದನಾತ್ಮಕ ಕಮೆಂಟುಗಳನ್ನು ಕನಿಷ್ಟ ಪಕ್ಷ ಮೊದಲ ಹಂತದಲ್ಲೇ ಚಿವುಟಿ ಹಾಕಿದಂತಾಗುತ್ತದೆ.
ಅದೃಷ್ಟವಶಾತ್ ನನ್ನ ಬ್ಲಾಗಿನಲ್ಲಿ ಇದುವರೆಗೂ ಯಾರೂ ಕೆಟ್ಟದಾಗಿ ಕಮೆಂಟ್ ಮಾಡಿಲ್ಲ. ಅದ್ಕೋಸ್ಕರ ನಾನು ನನ್ನ ಬ್ಲಾಗಿನಲ್ಲಿ ಬರುವ ಕಮೆಂಟುಗಳನ್ನು ಮಾಡರೇಟ್ ಮಾಡುವ ಗೋಜಿಗೆ ಹೋಗಿರಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಇನ್ಮುಂದೆ ಕಮೆಂಟ್ಸ್ ಮಾಡರೇಟ್ ಮಾಡಿಯೇ ಪಬ್ಲಿಶ್ ಮಾಡ್ತೀನಿ.

ನಿಮ್ಮ ಬ್ಲಾಗಿನಲ್ಲೇನಾದರೂ ನಿಂದನಾತ್ಮಕ ಕಮೆಂಟುಗಳ ಹಾವಳಿಯಿದ್ದರೆ ಈ ಮೊದಲು ಹೇಳಿದ ಎರಡೂ ವಿಧಾನಗಳನ್ನು ಅನುಸರಿಸಿ ನೋಡಿ. ಕೀಳು ಅಭಿರುಚಿಯ ಕಮೆಂಟುಗಳ ಹಾವಳಿಯನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗದಿದ್ದರೂ ಸ್ವಲ್ಪಮಟ್ಟಿಗೆ ನಿಯಂತ್ರಿಸುವುದಂತೂ ಖಂಡಿತಾ ಸಾಧ್ಯ. ಅನವಶ್ಯಕ, ನಿಂದನಾತ್ಮಕ ಕಮೆಂಟುಗಳು ಹುಟ್ಟದಂತೆ ನೋಡಿಕೊಳ್ಳುವುದು ಸ್ವಲ್ಪಮಟ್ಟಿಗೆ ಬ್ಲಾಗಿಗರ ಕೈಯಲ್ಲೇ ಇದೆ. ಯಾವುದೇ ವಿಷಯದ ಬಗ್ಗೆ ಬ್ಲಾಗಿನಲ್ಲಿ ಬರೆಯುವ ಮುಂಚೆ, ನಮ್ಮ ಬರಹ ಯಾರ ಮನಸ್ಸಿಗಾದರೂ ನೋವು ಉಂಟು ಮಾಡಬಲ್ಲುದೇ ಎಂದು ಒಂದ್ಸಲ ಆಲೋಚಿಸುವುದೊಳಿತು. ಮತ್ತೊಬ್ಬರ ಭಾವನೆಗಳನ್ನು ಕೆರಳಿಸುವ, ಮತ್ತೊಬ್ಬರನ್ನು ಅವಹೇಳನ ಮಾಡಿ ನಗಿಸುವ ಬರಹಗಳನ್ನು ಬರೆಯುವುದೂ ತಪ್ಪಲ್ಲವೇ? ಬ್ಲಾಗಿನಲ್ಲಿ ವೈಯಕ್ತಿಕ ವಿಚಾರಗಳನ್ನು ಸಾಧ್ಯವಾದಷ್ಟು ಕಡಿಮೆ ಹಂಚಿಕೊಳ್ಳಿ. ಇದರಿಂದ ಮತ್ತೊಬ್ಬರು ಅನಾವಶ್ಯಕವಾಗಿ ನಿಮ್ಮ ವೈಯಕ್ತಿಕ ಬದುಕಿನ ಮೇಲೆ ಕಮೆಂಟ್ ಮಾಡುವುದನ್ನು ತಡೆಯಬಹುದು. ಹೀಗೆ ಕೆಲವು ನಮ್ಮದೇ ಆದ ಮತ್ತು ಕೆಲವು ಬ್ಲಾಗಿಂಗ್ ಸೈಟುಗಳು ನೀಡುವ ಅಸ್ತ್ರಗಳನ್ನು ಬಳಸಿಕೊಂಡು ಸಾಧ್ಯವಾದ ಮಟ್ಟಿಗೆ ಬ್ಲಾಗುಲೋಕದಲ್ಲಿನ ದುಷ್ಟರ ನಿಯಂತ್ರಣ ಮಾಡಬಹುದು ಅಂತ ನನ್ನ ಅನಿಸಿಕೆ.

ಅದೆಲ್ಲ ಬಿಟ್ಟು, "ನನ್ನ ಬರಹದ ಬಗ್ಗೆ ಯಾರೋ ಅನಾಮಧೇಯರು ನಿಂದನಾತ್ಮಕವಾಗಿ ಕಮೆಂಟು ಬರೆದಿದ್ದಾರೆ" ಅಂತ ಬರೆಯುವುದನ್ನೇ ನಿಲ್ಲಿಸುವುದು ನಮ್ಮ ಸ್ವಂತಿಕೆಗೆ ಮತ್ತು ಪ್ರತಿಭೆಗೆ ನಾವೇ ಮಾಡಿಕೊಳ್ಳುವ ವಂಚನೆ, ಅಲ್ಲವೇ?

ಸದಭಿರುಚಿಯ, ಸೃಜನಾತ್ಮಕ, ಚಿಂತನಾರ್ಹ ಕಮೆಂಟುಗಳಿಗೆ ಸ್ವಾಗತ.

ಚಿತ್ರಕೃಪೆ: ಅಂತರ್ಜಾಲ

ನನಗೇ ಗೊತ್ತಿರಲಿಲ್ಲ! ಈ ಲೇಖನವನ್ನು "ಪ್ರತಿಭೆಗೆ ನಾವೇ ಮಾಡಿಕೊಳ್ಳುವ ವಂಚನೆ" ಎಂಬ ತಲೆಬರಹದಡಿಯಲ್ಲಿ ಮೇ ಫ್ಲವರ್ ಮೀಡೀಯ ಹೌಸ್ ನವರು 'ಅವಧಿ' ಬ್ಲಾಗಿನ 'ಬ್ಲಾಗ್ ಮಂಡಲ' ಎಂಬ ವಿಭಾಗದಲ್ಲಿ ಪರಿಚಯಿಸಿ, ಧನ್ಯವಾದಗಳನ್ನು ಅರ್ಪಿಸಿದ್ದಾರೆ. ನಿಜ ಹೇಳಬೇಕೆಂದರೆ, ನನ್ನ ಈ ಲೇಖನಕ್ಕೆ ಸ್ಪೂರ್ತಿಯಾಗಿದ್ದೇ 'ಅವಧಿ' ಬ್ಲಾಗಿನ 'ಜೋಗಿ'ಗೆ ಬುದ್ದಿ ಹೇಳಿ ಎಂಬ ಲೇಖನ. ಜೋಗಿ (ಗಿರೀಶ್ ರಾವ್) ರವರ ಬರಹಗಳನ್ನು ತುಂಬಾ ಇಷ್ಟಪಟ್ಟು ಓದುವವರಲ್ಲಿ ನಾನೂ ಒಬ್ಬ. ಅವರು ಬ್ಲಾಗು ಮುಚ್ಚಿದ ಸಂಗತಿ ನನಗೆ ನೋವಿನ ವಿಷಯವಾಗಿ ಕಾಡಿದ್ದು ನಿಜ. ಈ ಅನವಶ್ಯಕ, ನಿಂದನಾತ್ಮಕ ಕಮೆಂಟುಗಳ ಹಾವಳಿ ನಿಯಂತ್ರಿಸಲು ಬ್ಲಾಗು ಮುಚ್ಚುವ ಬದಲು ಬೇರೆ ಏನಾದರೂ ಮಾಡಬಹುದೇ ಎಂದು ಯೋಚಿಸಿದಾಗ ಹುಟ್ಟಿದ್ದೇ ಈ ಲೇಖನ. ಲೇಖನವನ್ನು ವಿಸ್ತ್ರತ ಓದುಗ ಬಳಗಕ್ಕೆ ಪರಿಚಯಿಸಿದ 'ಅವಧಿ' ಗೆ ಕೃತಜ್ಞತೆಗಳು. 'ಅವಧಿ' ಬ್ಲಾಗಿನಲ್ಲಿ ಈ ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲಾಲ್‌ಬಾಗ್ ಸುಂದರಿಯರು...

'
ಲಾಲ್‌ಬಾಗ್ ಉದ್ಯಾನವನದಲ್ಲಿ ನಡೆಯುತ್ತಿರುವ ಪುಷ್ಪೋತ್ಸವದಲ್ಲಿ ಕಳೆದ ಶನಿವಾರದಂದು ಕಂಡ ಕೆಲವು ಬೆಡಗಿಯರು...

ಹೂವು, ಚೆಲುವೆಲ್ಲಾ ತಂದೆಂದಿತು...





ಹೂವೇ ಹೂವೇ...



"ನೀವು ಬರ್ತೀರಿ ಅಂತ ನಂಗೆ ಎಷ್ಟೊಂದು ಅಲಂಕಾರ ಮಾಡಿದಾರೆ ನೋಡಿ..."


"ನಮ್ದೂ ಫೋಟೋ ತೆಗೀರೀ..."

ನನ್ನ ಚೆಲುವಿಗಾರು ಸಾಟಿ...


"ಏಕೋ ಕಾಣೆ, ನಂಗೆ ನಾಚ್ಕೆ ಆಗುತ್ತೆ..."

"ಕೆಂಪುತೋಟದ ಕಂದಮ್ಮಗಳು ನಾವು..."




ಹೂವಿನ ಬಾಣದಂತೆ...



"ನನ್ನ ಹೆಸರಷ್ಟೇ ಡೈನೋಸಾರ್.. ಮೈತುಂಬಾ ಹೂಗಳೇ... "



ಹೂವೊಂದು, ಬಳಿ ಬಂದು, ಸೋಕಿತು ನನ್ನೆದೆಯಾ...


ಬರೀ ಇಷ್ಟೇನಾ ಅನ್ಬೇಡಿ... ಇನ್ನೂ ತುಂಬಾ ಇವೆ. ಎಲ್ಲಾ ಇಲ್ಲೇ ನೋಡಿಬಿಟ್ರೆ ಹ್ಯಾಗೇ :) ... ಲಾಲ್‌ಬಾಗ್ ಪುಷ್ಪೋತ್ಸವ ಆಗಸ್ಟ್ 15, ಸ್ವಾತಂತ್ರೋತ್ಸವದ ದಿನದವರೆಗೆ ನಡೆಯುತ್ತದೆ. ಒಂದ್ಸಲ ಹೋಗಿ ನೋಡ್ಕೊಂಡು ಬನ್ನಿ.
'
ಪ್ರೀತಿಯಿಂದ,
'

ಸಾರೀ ಪುಟ್ಟೀ, ನೆಕ್ಸ್ಟ್ ಟೈಮ್ ಮಿಸ್ ಮಾಡ್ಕೋಳಲ್ಲ...

'


ಇವತ್ತು ರಕ್ಷಾಬಂಧನ; ನನ್ನ ತಂಗಿ ನಾವು ಮೂರು ಜನ ಅಣ್ಣಂದಿರಿಗೆ ರಾಖಿ ಕಟ್ಟಲು ಊರಲ್ಲಿ ನಮ್ಮ ಮನೆ, ಅಂದ್ರೆ ತನ್ನ ತವರು ಮನೆಗೆ ಬಂದಿರ್ತಾಳೆ. ಆದರೆ ನಾನೊಬ್ಬ ನತದೃಷ್ಟ ಅಣ್ಣ ಮಾತ್ರ ಇಲ್ಲಿ ಬೆಂಗಳೂರೆಂಬ ಕರ್ಮಭೂಮಿಯಲ್ಲಿ ಕೆಲಸದ ಬಂಧಿಯಾಗಿ ಕುಳಿತಿದ್ದೇನೆ. "ಅಣ್ಣಾ ಪ್ಲೀಸ್, ಅವತ್ತೊಂದಿನ ಊರಿಗೆ ಬಂದ್ ಹೋಗೋ, ನಿಂಗೂ ರಾಖಿ ಕಟ್ಟತೇನೀ..." ಅಂತ ತಂಗಿ ಒಂದು ವಾರ ಮುಂಚೇನೇ ಕರೆದಿದ್ರೂ, ಹೋಗಬೇಕೆನ್ನೋ ಮಹದಾಸೆ ನಂಗೂ ಇದ್ರೂ ಹೋಗಲಾಗದ ಅಸಹಾಯಕತೆ ನನ್ನದು. ಊರಲ್ಲಿರುವ ನನ್ನಿಬ್ಬರು ಸಹೋದರರೇ ಅದೃಷ್ಟವಂತರು ಅನ್ಸುತ್ತೆ. ಇರುವ ಒಬ್ಬಳು ತಂಗಿ ಕೈಯಿಂದ ರಾಖಿ ಕಟ್ಟಿಸಿಕೊಂಡು, ತಂಗಿಯ ಶುಭಾಶೀರ್ವಾದ ಪಡೆಯುವ ಅವಕಾಶಾನ ನಾನೊಬ್ಬ ಮಾತ್ರ ಮಿಸ್ ಮಾಡ್ಕೋತಿದೀನಿ. ಆದರೆ ತಂಗಿ ಕೋರಿಯರ್ ನಲ್ಲಿ ಕಳಿಸಿದ ರಾಖಿಯನ್ನೇ ಕಣ್ಣಿಗೊತ್ತಿಕೊಂಡು ನಾನೇ ಸ್ವತಃ ಕಟ್ಟಿಕೊಂಡು ಅಷ್ಟಕ್ಕೇ ತೃಪ್ತಿಪಟ್ಟುಕೊಂಡು ಕುಳಿತಿದ್ದೇನೆ. ಸಾರೀ ತಂಗ್ಯವ್ವ, ನಾನು ಈ ವರ್ಷ ನಿನ್ನ ಕೈಯ್ಯಾರೇ ರಾಖಿಯಂತೂ ಕಟ್ಟಿಸ್ಕೊಳ್ಳೋಕಾಗ್ತಿಲ್ಲ. ಆದರೆ ನಿನ್ನ ಶುಭಾಶೀರ್ವಾದ, ಹಾರೈಕೆಗಳು ನನ್ನೊಂದಿಗೆ ಸದಾ ಇರ್ತವೆ ಅಂತ ಭಾವಿಸ್ತೀನಿ.

ಹುಟ್ಟಿದ ಊರು ಬಿಟ್ಟು ಬೆಂಗಳೂರಿನಲ್ಲಿ ಇದ್ದು ಕಳೆದುಕೊಳ್ಳುತ್ತಿರುವ ಸೌಭಾಗ್ಯಗಳಲ್ಲಿ ಇದೂ ಒಂದು. ಊರಲ್ಲಿದ್ದಾಗ ಕಳೆದ ರಕ್ಷಾಬಂಧನದ ದಿನಗಳ ಮೆಲುಕೇ ಈ ದಿನ ನನ್ನ ಸಂಗಾತಿ. ಚಿಕ್ಕವಳಿದ್ದಾಗ ತಂಗಿ, "ನನಗ ಅಂಗಡಿಗೆ ಹೋಗಿ ರಾಖಿ ತರಾಕ ಗೊತ್ತಾಗುದಿಲ್ಲ, ನೀವsss ತಂದು ಕೊಟ್ರ ರಾಖಿ ಕಟ್ಟತೇನಪಾ" ಅಂತ ಮುಗ್ಧವಾಗಿ ಹೇಳಿ ನಮ್ಮನ್ನೆಲ್ಲಾ ನಗೆಗಡಲಲ್ಲಿ ತೇಲಿಸ್ತಿದ್ಲು. "ನಾವsss ರಾಖಿ ತಂದು ಕೊಟ್ಟು ಕಟ್ಟಸ್ಕೊಂಡು ನಿನಗ ಗಿಫ್ಟ್ ಕೊಡಬೇಕೇನವಾ, ಹೋಗೋಗ್.." ಅಂತ ನಾವು ಅಣ್ಣಂದಿರು ಅವಳಿಗೆ ಗೋಳು ಹುಯ್ಕೋತಿದ್ವಿ. ರಾಖಿ ಮತ್ತು ಪೇಢಾ ತಂದುಕೊಟ್ಟು, ನಾವು ಮೂರೂ ಜನ ಅಣ್ಣಂದಿರು ಬೆಳಿಗ್ಗೆ ಸ್ನಾನ ಮಾಡಿ, ಹೊಸ ಬಟ್ಟೆ ತೊಟ್ಟುಕೊಂಡು ತಂಗಿ ಕೈಯಲ್ಲಿ ರಾಖಿ ಕಟ್ಟೀಸ್ಕೊಳ್ಳೋಕೆ ಸಾಲಾಗಿ ಮಣೆ ಹಾಕಿಕೊಂಡು ಕೂಡ್ತಿದ್ವಿ. ತಂಗಿ ಬಂದು ನಮ್ಮೆಲ್ಲರ ಹಣೆಗೆ ವಿಭೂತಿ ಪಟ್ಟಿ ಬಳಿದು, ಆರತಿ ತಟ್ಟೆಯಲ್ಲಿನ ಜ್ಯೋತಿಯ ಬಿಸಿಗೆ ವೀಳ್ಯದೆಲೆ ಕಾಯಿಸಿ, ನಮ್ಮ ಹಣೆಗೆ ವೀಳ್ಯದೆಲೆಯ ಕಪ್ಪು-ಕಾಡಿಗೆ ಬೊಟ್ಟು ಹಚ್ಚಿ, ತನ್ನ ಮುದ್ದಾದ ಪುಟ್ಟ-ಪುಟ್ಟ ಕೈಗಳಿಂದ ನಮ್ಮೆಲ್ಲರಿಗೂ ರಾಖಿ ಕಟ್ಟಿ, ಬಾಯಲ್ಲಿ ಪೇಢಾ ಹಾಕಿ, ಸರತಿಯಂತೆ ನಮಗೆ ಆರತಿ ಬೆಳಗುತ್ತಿದ್ದಳು. ಅಪ್ಪ ನಮಗೆ ಮೊದಲೇ ಕೊಟ್ಟಿರುತ್ತಿದ್ದ ಪುಡಿಗಾಸಿನ ಜೊತೆಗೆ ನಾವು ಮಣ್ಣಿನ ಕುಡಿಕೆಯಲ್ಲಿ ಕೂಡಿಟ್ಟಿರುತ್ತಿದ್ದ ಬಿಡಿಗಾಸನ್ನೂ ಸೇರಿಸಿ ಆರತಿ ತಟ್ಟೆಯಲ್ಲಿ ಹಾಕಿ ನಾವೆಲ್ಲ ತಂಗಿಯ ಶುಭಾಶೀರ್ವಾದ ಪಡೀತಿದ್ವಿ. ನಂತರ ತಂಗಿ ಕಟ್ಟಿದ್ದ ರಾಖಿಯನ್ನು ಹೆಮ್ಮೆಯಿಂದ ಪದೇ ಪದೇ ನೋಡಿಕೊಳ್ಳುತ್ತ ಶಾಲೆಯ ಕಡೆ ಹೆಜ್ಜೆ ಹಾಕ್ತಿದ್ವಿ. ನಾವು ಹೋಗುತ್ತಿದ್ದ ಶಾಲೆ ಬರೀ ಗಂಡು ಮಕ್ಕಳ ಶಾಲೆಯಾದ್ದುದರಿಂದ ಶಾಲೆಯಲ್ಲಿ ರಾಖಿ ಕಟ್ಟಲು ಬರುವ ಹುಡುಗಿಯರ ಕಾಟವಾಗಲಿ, ನಾವು ಅವರಿಂದ ತಪ್ಪಿಸಿಕೊಂಡು ಓಡುವ ಪ್ರಸಂಗವಾಗಲಿ ನಮಗೆ ಬರುತ್ತಿರಲಿಲ್ಲ ಬಿಡಿ :) ಸ್ಕೂಲಲ್ಲಿ ಓರಗೆಯ ಗೆಳೆಯರಿಗೆ ನಮ್ಮ ಕೈಯಲ್ಲಿನ ರಾಖಿ ತೋರಿಸಿ "ನಮ್ ತಂಗಿ ಕಟ್ಟಿದ ರಾಖಿ ನೋಡ್ರಲೇ, ಎಷ್ಟ್ ಛಂದ್ ಐತೀ" ಅಂತ ಜಂಭ ಕೊಚ್ಚಿಕೋತಿದ್ವಿ. ರಕ್ಷಾಬಂಧನ ಮುಗಿದು ಮೂರ್ನಾಲ್ಕು ದಿನಗಳು ಕಳೆದು, ರಾಖಿಯಲ್ಲಿನ ಚಿತ್ತಾರದ ಪಕಳೆಗಳು ಒಂದೊಂದಾಗಿ ಕಳಚಿ ಬಿದ್ದು, ಕಡೆಗೆ ದಾರವೊಂದೇ ಉಳಿಯುವವರೆಗೆ ರಾಖಿ ಬಿಚ್ಚುತ್ತಿರಲಿಲ್ಲ. ಅಷ್ಟೊಂದು ಪ್ರೀತಿ ನಮಗೆಲ್ಲ ನಮ್ಮ ತಂಗಿಯ ಮೇಲೆ ಮತ್ತು ಅವಳು ಕಟ್ಟಿದ ರಾಖಿಯ ಮೇಲೆ.

ಫೂಲೋಂಕಾ ತಾರೋಂಕಾ ಸಬ್ಕಾ ಕೆಹ್ನಾ ಹೈ,
ಏಕ್ ಹಜಾರೋಂ ಮೇಂ ಮೇರಿ ಬೆಹ್ನಾ ಹೈ,
ಸಾರೀ ಉಮರ್ ಹಮೇ ಸಂಗ್ ರೆಹ್ನಾ ಹೈ...


ಮುಂದೆ ಸ್ಕೂಲು ಮುಗಿದು ಕಾಲೇಜು ಓದಲು ಹುಬ್ಬಳ್ಳಿಯಲ್ಲಿ ಇದ್ದಾಗಲೂ ತಪ್ಪದೇ ಪ್ರತಿ ವರ್ಷ ರಕ್ಷಾಬಂಧನದ ದಿನ ಊರಿಗೆ ಹೋಗಿ ಬರ್ತಿದ್ದೆ. ಮದುವೆಯಾದ ಮೇಲೆ ತಂಗಿಯೂ ಪ್ರತಿ ವರ್ಷ ತಪ್ಪದೇ ರಕ್ಷಾಬಂಧನದ ದಿನ ಊರಿಗೆ ಬರ್ತಾಳೆ. ಉನ್ನತ ವ್ಯಾಸಂಗಕ್ಕಾಗಿ ನಾನು ಬೆಂಗಳೂರಿಗೆ ಬಂದ ಮೇಲೆಯೇ ರಕ್ಷಾಬಂಧನದ ದಿನ ಊರಲ್ಲಿರಲಾಗದ ಹತಭಾಗ್ಯ ನನ್ನದಾಗಲು ಶುರುವಾಯಿತು. ಕೆಲವು ಸಲ ಊರಿಗೆ ಹೋಗಲು ಸಾಧ್ಯವಾಗಿದ್ದರೂ, ಈ ಶುಭದಿನವನ್ನು ಮಿಸ್ ಮಾಡ್ಕೊಂಡಿದ್ದೇ ಹೆಚ್ಚು ಸಲ.

ನನ್ನ ಮುದ್ದು ತಂಗ್ಯವ್ವ, ನಂಗೊತ್ತು, ಇವತ್ತು ಊರಲ್ಲಿ ಉಳಿದ ಇನ್ನಿಬ್ಬರು ಅಣ್ಣಂದಿರಿಗೆ ರಾಖಿ ಕಟ್ಟುವಾಗ ನೀ ನನ್ನನ್ನು ಖಂಡಿತ ಮಿಸ್ ಮಾಡ್ಕೊಂಡಿರ್ತೀಯಾ ಅಂತ. ಸಾರೀ ಪುಟ್ಟೀ, ಬೇಜಾರ್ ಮಾಡ್ಕೊಬೇಡ; ಇದೊಂದು ಸರ್ತಿ ಕ್ಷಮಿಸಿಬಿಡು. ನೀ ಕಳಿಸಿದ ರಾಖಿ ಇವತ್ತು ಬೆಳಿಗ್ಗೇನೇ ನನ್ನ ಕೈ ಸೇರಿದೆ. ನಿನ್ನ ಹೆಸರು ಹೇಳಿಕೊಂಡು ಅದನ್ನ ನನ್ನ ಕೈಗೆ ನಾನೇ ಕಟ್ಕೊಂಡಿದೀನಿ. ಇದೊಂದು ಸರ್ತಿ ನೀನು ಅಲ್ಲಿಂದಲೇ ನಂಗೆ ಶುಭಾಶೀರ್ವಾದ ಮಾಡಿ, "ನಿಂಗೆ ಒಳ್ಳೆಯದಾಗಲಿ ಅಣ್ಣ" ಅಂತ ಹಾರೈಸಿಬಿಡು. ಮುಂದಿನ ಸಲ ನಿನ್ನ ಕೈಯಾರೆ ರಾಖಿ ಕಟ್ಟಿಸ್ಕೊಳ್ಳೋಕೆ ತಪ್ಪದೇ ಊರಿಗೆ ಬರ್ತೀನಿ, ಮಿಸ್ ಮಾಡ್ಕೋಳಲ್ಲ, ಪ್ರಾಮೀಸ್! :)
'

ಚಿತ್ರಕೃಪೆ: ಅಂತರ್ಜಾಲ'

 

© 2009   Created by DHARWAD on Ning.   Create Your Own Social Network

Badges  |  Report an Issue  |  Privacy  |  Terms of Service